ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
Cross references
ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.
ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ
ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು.
ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.