ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು.
Cross references
ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.
ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.
ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.