ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
Cross references
ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.