Home Bibles ಯೆಹೋಶುವ 4:10 · ಕನ್ನಡ ಬೈಬಲ್
ಯೆಹೋಶುವ 4:10 · ಕನ್ನಡ ಬೈಬಲ್

ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.

Cross references

ನಿರ್ಗಮಕಾಂಡ 12:39

ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.

ಅಂಕೆಗಳ ಪುಸ್ತಕ 27:21

ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್‌ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.

ದ್ವಿತೀಯೋಪದೇಶಕಾಂಡ 31:9

ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

ಯೆಹೋಶುವ 3:13

ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.

ಯೆಹೋಶುವ 3:16

ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್‌ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.

ಯೆಹೋಶುವ 3:17

ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.

ಯೆಹೋಶುವ 24:11

ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.

ಕೀರ್ತನೆಗಳು 119:60

ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.

ಸಾಮೇತಿಗಳು 27:1

ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.

ಸಭಾಪ್ರಸಂಗಿ 9:10

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

ಯೆಶಾಯ 28:16

ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).

2 ಕೊರಿಂಥದವರಿಗೆ 6:2

(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).

ಹೆಬ್ರಿಯರಿಗೆ 3:7

ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ

Interlinear

Choose Theme