ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
Cross references
ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.