ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
Cross references
ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.
ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು.
ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.
ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.