ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು.
Cross references
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ
ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!