ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು.
Cross references
ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
ಅವನು ಪ್ರತಿವರುಷ ಹೊರಟು ಬೇತೇಲ್ ಗಿಲ್ಗಾಲ್ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.
ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.