Home Bibles ಯೆಹೋಶುವ 6:16 · ಕನ್ನಡ ಬೈಬಲ್
ಯೆಹೋಶುವ 6:16 · ಕನ್ನಡ ಬೈಬಲ್

ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.

Cross references

ಯೆಹೋಶುವ 6:5

ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.

ನ್ಯಾಯಾಧಿಪತಿಗಳು 7:20

ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.

ನ್ಯಾಯಾಧಿಪತಿಗಳು 7:22

ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.

2 ದಿನವೃತ್ತಾಂತ 13:15

ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.

2 ದಿನವೃತ್ತಾಂತ 20:22

ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.

Interlinear

Choose Theme