ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
Cross references
ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು.
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.
ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.
ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.