ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು.
ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.