ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
Cross references
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.
ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.
ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.
ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.