ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
Cross references
ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.
ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
ಕರ್ತನು ಮೋಶೆಗೆ ಹೇಳಿದ್ದೇನೆಂದರೆ
ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.
ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.
ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.
ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.
ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.
ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.