ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
Cross references
ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.
ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.