ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
Cross references
ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.
ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.