Home Bibles ಯೆಹೋಶುವ 7:24 · ಕನ್ನಡ ಬೈಬಲ್
ಯೆಹೋಶುವ 7:24 · ಕನ್ನಡ ಬೈಬಲ್

ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.

Cross references

ಆದಿಕಾಂಡ 18:25

ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.

ನಿರ್ಗಮಕಾಂಡ 20:5

ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.

ಅಂಕೆಗಳ ಪುಸ್ತಕ 16:27

ಆಗ ಅವರು ಕೋರಹ ದಾತಾನ್‌ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್‌ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.

ಯೆಹೋಶುವ 6:18

ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.

ಯೆಹೋಶುವ 6:21

ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.

ಯೆಹೋಶುವ 7:1

ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.

ಯೆಹೋಶುವ 7:26

ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.

ಯೆಹೋಶುವ 15:7

ಅಲ್ಲಿಂದ ಆಕೋರ್‌ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್‌ಷೆಮೆಷಿನ ನೀರಿಗೂ ಅಲ್ಲಿಂದ ಏನ್‌ರೋಗೆಲಿಗೂ

ಯೆಹೋಶುವ 22:20

ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.

ಯೋಬ 20:15

ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.

ಯೋಬ 20:23

ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.

ಸಾಮೇತಿಗಳು 15:27

ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.

ಸಭಾಪ್ರಸಂಗಿ 5:13

ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.

ಯೆಶಾಯ 65:10

ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.

ಯೆಹೆಜ್ಕೇಲ 22:13

ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.

ಹೊಶೇಯ 2:15

ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.

1 ತಿಮೋಥೆಯ 6:9

ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

Interlinear

Choose Theme