ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
Cross references
ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.
ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.
ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ