ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
Cross references
ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.