Home Bibles ಯೆಹೋಶುವ 8:29 · ಕನ್ನಡ ಬೈಬಲ್
ಯೆಹೋಶುವ 8:29 · ಕನ್ನಡ ಬೈಬಲ್

ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.

Cross references

ದ್ವಿತೀಯೋಪದೇಶಕಾಂಡ 21:22

ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ದ್ವಿತೀಯೋಪದೇಶಕಾಂಡ 21:23

ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ಯೆಹೋಶುವ 7:26

ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.

ಯೆಹೋಶುವ 8:23

ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.

ಯೆಹೋಶುವ 10:26

ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.

ಯೆಹೋಶುವ 10:27

ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.

ಯೆಹೋಶುವ 10:30

ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.

ಯೆಹೋಶುವ 10:33

ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.

ಯೆಹೋಶುವ 12:9

ಯೆರಿಕೋವಿನ ಅರಸನು ಒಬ್ಬನು; ಬೇತೇಲ್‌ ಬಳಿಯಲ್ಲಿರುವ ಆಯಿಯ ಅರಸನು ಒಬ್ಬನು;

2 ಸಮುವೇಲ 18:17

ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.

ಎಸ್ತೇರ್ 7:10

ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಕೀರ್ತನೆಗಳು 107:40

ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.

ಕೀರ್ತನೆಗಳು 110:5

ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.

ಅಪೋಸ್ತಲರ ಕೃತ್ಯಗಳು 12:23

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

ಪ್ರಕಟನೆ 19:17

ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,

Interlinear

Choose Theme