Home Bibles ಯೆಹೋಶುವ 9:14 · ಕನ್ನಡ ಬೈಬಲ್
ಯೆಹೋಶುವ 9:14 · ಕನ್ನಡ ಬೈಬಲ್

ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.

Cross references

ನಿರ್ಗಮಕಾಂಡ 28:30

ನ್ಯಾಯದ ಎದೆಪದಕದಲ್ಲಿ ಊರೀಮ್‌ ತುವ್ಮೆಾಮ್‌ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್‌ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.

ಅಂಕೆಗಳ ಪುಸ್ತಕ 27:21

ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್‌ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.

ನ್ಯಾಯಾಧಿಪತಿಗಳು 1:1

ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.

ನ್ಯಾಯಾಧಿಪತಿಗಳು 20:18

ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.

ನ್ಯಾಯಾಧಿಪತಿಗಳು 20:28

ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.

1 ಸಮುವೇಲ 14:18

ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್‌ ಮಕ್ಕಳ ಬಳಿಯಲ್ಲಿತ್ತು.

1 ಸಮುವೇಲ 22:10

ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.

1 ಸಮುವೇಲ 23:9

ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.

1 ಸಮುವೇಲ 30:7

ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.

2 ಸಮುವೇಲ 2:1

ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.

2 ಸಮುವೇಲ 5:19

ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.

1 ದಿನವೃತ್ತಾಂತ 10:13

ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.

1 ದಿನವೃತ್ತಾಂತ 10:14

ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.

ಎಜ್ರಾ 8:21

ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.

ಸಾಮೇತಿಗಳು 3:5

ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.

ಯೆಶಾಯ 30:1

ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಯೆಶಾಯ 30:2

ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ.

ಯಾಕೋಬ 1:5

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.

Interlinear

Choose Theme