ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
Cross references
ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.