ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
Cross references
ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.