ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
Cross references
ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.