Home Bibles ಯೂದ 1:5 · ಕನ್ನಡ ಬೈಬಲ್
ಯೂದ 1:5 · ಕನ್ನಡ ಬೈಬಲ್

ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.

Cross references

ಅಂಕೆಗಳ ಪುಸ್ತಕ 14:22

ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ

ಅಂಕೆಗಳ ಪುಸ್ತಕ 26:64

ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.

ದ್ವಿತೀಯೋಪದೇಶಕಾಂಡ 2:15

ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.

ಕೀರ್ತನೆಗಳು 106:26

ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ

ರೋಮಾಪುರದವರಿಗೆ 15:15

ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;

1 ಕೊರಿಂಥದವರಿಗೆ 10:1

ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;

ಹೆಬ್ರಿಯರಿಗೆ 3:16

ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.

2 ಪೇತ್ರ 1:12

ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.

2 ಪೇತ್ರ 3:1

ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.

Interlinear

Choose Theme