ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
Cross references
ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ,
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.