ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
Cross references
ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ.
ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.