ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
Cross references
ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.
ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
ಹೊರ್ಮದ ಅರಸನು ಒಬ್ಬನು; ಅರಾದಿನ ಅರಸನು ಒಬ್ಬನು;
ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್ಹೋಗ್ಲಾ, ಕೆಚ್ಚೀಚ್ ತಗ್ಗು
ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.
ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.