ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
Cross references
ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.
ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.