ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
Cross references
ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ
ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು;
ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.