ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
Cross references
ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.