ಆಗ ಯೆಪ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು.
Cross references
ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು.
ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.