ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
Cross references
ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು.
ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.