ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
Cross references
ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.
ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನು ಒಗಟಾಗಿ ಹೇಳು.
ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.
ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.