ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
Cross references
ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.
ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ.
ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.