ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
Cross references
ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.