ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
Cross references
ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.