ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
Cross references
ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು.
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.