ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
Cross references
ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.