ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
Cross references
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.
ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.