ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
Cross references
ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.