Home Bibles ನ್ಯಾಯಾಧಿಪತಿಗಳು 2:14 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 2:14 · ಕನ್ನಡ ಬೈಬಲ್

ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.

Cross references

ಲೇವ್ಯಕಾಂಡ 26:17

ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.

ಲೇವ್ಯಕಾಂಡ 26:28

ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.

ಲೇವ್ಯಕಾಂಡ 26:37

ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.

ಅಂಕೆಗಳ ಪುಸ್ತಕ 32:13

ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.

ಅಂಕೆಗಳ ಪುಸ್ತಕ 32:14

ಇಗೋ, ಕರ್ತನ ಕೋಪವು ಇಸ್ರಾಯೇಲ್‌ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.

ದ್ವಿತೀಯೋಪದೇಶಕಾಂಡ 28:20

ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.

ದ್ವಿತೀಯೋಪದೇಶಕಾಂಡ 28:25

ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.

ದ್ವಿತೀಯೋಪದೇಶಕಾಂಡ 28:58

ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ

ದ್ವಿತೀಯೋಪದೇಶಕಾಂಡ 29:19

ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

ದ್ವಿತೀಯೋಪದೇಶಕಾಂಡ 31:17

ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.

ದ್ವಿತೀಯೋಪದೇಶಕಾಂಡ 32:30

ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?

ಯೆಹೋಶುವ 7:12

ಆದದ ರಿಂದ ಇಸ್ರಾಯೇಲ್‌ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.

ಯೆಹೋಶುವ 23:16

ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.

ನ್ಯಾಯಾಧಿಪತಿಗಳು 1:19

ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.

ನ್ಯಾಯಾಧಿಪತಿಗಳು 1:34

ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು

ನ್ಯಾಯಾಧಿಪತಿಗಳು 3:7

ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.

ನ್ಯಾಯಾಧಿಪತಿಗಳು 3:8

ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.

ನ್ಯಾಯಾಧಿಪತಿಗಳು 4:2

ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.

ನ್ಯಾಯಾಧಿಪತಿಗಳು 10:7

ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.

2 ಸಮುವೇಲ 24:1

ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.

2 ಅರಸುಗಳು 13:3

ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.

2 ಅರಸುಗಳು 17:20

ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.

2 ದಿನವೃತ್ತಾಂತ 15:5

ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.

2 ದಿನವೃತ್ತಾಂತ 28:5

ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.

2 ದಿನವೃತ್ತಾಂತ 36:16

ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.

ನೆಹೆಮ್ಯ 9:27

ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.

ಕೀರ್ತನೆಗಳು 44:9

ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.

ಕೀರ್ತನೆಗಳು 44:11

ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.

ಕೀರ್ತನೆಗಳು 44:12

ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.

ಕೀರ್ತನೆಗಳು 106:40

ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು

ಕೀರ್ತನೆಗಳು 106:42

ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.

ಯೆಶಾಯ 42:24

ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

ಯೆಶಾಯ 50:1

ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.

ಯೆರೆಮಿಯ 37:10

ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.

Interlinear

Choose Theme