ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
Cross references
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.
ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.
ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.
ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.