ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
Cross references
ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.
ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.
ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು.
ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.