Home Bibles ನ್ಯಾಯಾಧಿಪತಿಗಳು 2:19 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 2:19 · ಕನ್ನಡ ಬೈಬಲ್

ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.

Cross references

ನಿರ್ಗಮಕಾಂಡ 32:7

ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.

ಯೆಹೋಶುವ 24:31

ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.

ನ್ಯಾಯಾಧಿಪತಿಗಳು 2:7

ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.

ನ್ಯಾಯಾಧಿಪತಿಗಳು 3:11

ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.

ನ್ಯಾಯಾಧಿಪತಿಗಳು 4:1

ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.

ನ್ಯಾಯಾಧಿಪತಿಗಳು 8:33

ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್‌ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.

ನ್ಯಾಯಾಧಿಪತಿಗಳು 10:13

ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.

1 ಸಮುವೇಲ 15:23

ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.

2 ದಿನವೃತ್ತಾಂತ 24:17

ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.

ನೆಹೆಮ್ಯ 9:28

ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.

ಕೀರ್ತನೆಗಳು 78:8

ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.

ಯೆರೆಮಿಯ 3:17

ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.

ಯೆರೆಮಿಯ 16:12

ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.

ಮತ್ತಾಯ 23:32

ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.

Interlinear

Choose Theme