ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
Cross references
ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.