ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
Cross references
ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.
ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.
ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು.
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.
ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.