ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು.
Cross references
ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.