ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ
Cross references
ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ
ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.