ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
Cross references
ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
ಅವರು ಬೆಜೆಕಿನಲ್ಲಿ ಅದೋನೀಬೆಜೆಕನನ್ನು ಕಂಡು ಅವನಿಗೆ ವಿರೋಧವಾಗಿ ಯುದ್ಧಮಾಡಿ ಅಲ್ಲಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಕೊಂದುಹಾಕಿದರು.
ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.