ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
Cross references
ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ
ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.
ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು.
ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.